ಪ್ರಧಾನ ಮಂತ್ರಿಯವರ ಕಛೇರಿ
ಕರ್ನಾಟಕದ ಹುಬ್ಬಳ್ಳಿಯಲ್ಲಿ ಸಂಭವಿಸಿದ ಅವಘಡದಲ್ಲಿ ಜೀವ ಹಾನಿಗೆ ಪ್ರಧಾನ ಮಂತ್ರಿ ಸಂತಾಪ
ಪಿ.ಎಂ.ಎನ್.ಆರ್.ಎಫ್.ನಿಂದ ತಾತ್ಕಾಲಿಕ ಪರಿಹಾರ ಘೋಷಣೆ
Posted On:
24 MAY 2022 6:05PM by PIB Bengaluru
ಕರ್ನಾಟಕದ ಹುಬ್ಬಳ್ಳಿಯಲ್ಲಿ ಸಂಭವಿಸಿದ ಅವಘಡದಲ್ಲಿ ಜೀವ ಹಾನಿಯಾಗಿರುವುದಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜೀವ ಹಾನಿಯಾಗಿರುವ ಕುಟುಂಬದ ನಿಕಟ ಸಂಬಂಧಿಗಳಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ತಾತ್ಕಾಲಿಕ ಪರಿಹಾರ ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರವನ್ನು ಪ್ರಧಾನ ಮಂತ್ರಿ ಅವರು ಘೋಷಿಸಿದ್ದಾರೆ.
ಪ್ರಧಾನ ಮಂತ್ರಿ ಅವರ ಕಚೇರಿ ಈ ಬಗ್ಗೆ ಟ್ವೀಟ್ ಮಾಡಿದ್ದು ಅದರಲ್ಲಿ;
"ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆದ ಅವಘಡದಲ್ಲಿ ಜೀವ ಹಾನಿಯಾಗಿರುವುದು ತೀವ್ರವಾದ ನೋವು ತಂದಿದೆ. ಸಂತ್ರಸ್ತರ ಕುಟುಂಬಕ್ಕೆ ನನ್ನ ಸಂತಾಪಗಳು.ಗಾಯಾಳುಗಳು ಬೇಗ ಗುಣಮುಖರಾಗುವಂತಾಗಲಿ:PM @narendramodi" ಎಂದು ಹೇಳಿದ್ದಾರೆ.
***
(Release ID: 1828049)
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam